
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುವ ಕುರಿತು ಸ್ಥಿತಿಗತಿ ವರದಿ ಸಲ್ಲಿಸಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಆಗಸ್ಟ್ 12ರಿಂದ 15 ದಿನಗಳವರೆಗೆ ಪ್ರತಿದಿನ 12,000 ಕ್ಯುಸೆಕ್ ನೀರು ಹರಿಸುವಂತೆ ಪ್ರಾಧಿಕಾರ ನಿರ್ದೇಶನ ನೀಡಿದ್ದು, ಈವರೆಗೆ 14 ಟಿಎಂಸಿ ನೀರು ಹರಿಸಲಾಗಿದೆ ಎಂದು ಕರ್ನಾಟಕ ತಿಳಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.