
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರು ಪೂರ್ವಾನುಮತಿ ಇಲ್ಲದೆ ರಾಜ್ಯ ಬಿಟ್ಟು ತೆರಳುವಂತಿಲ್ಲ ಎಂಬ ಸೆಷನ್ಸ್ ನ್ಯಾಯಾಲಯದ ಷರತ್ತನ್ನು ಹೈಕೋರ್ಟ್ ರದ್ದುಪಡಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಸಚಿವರಾಗಿರುವ ನಾಗೇಂದ್ರ ಅವರು ಅಧಿಕೃತ ಕೆಲಸಗಳಿಗಾಗಿ ರಾಜ್ಯದ ಗಡಿ ಮೀರಿ ತೆರಳಬೇಕಾಗುವುದರಿಂದ ಈ ಷರತ್ತು ಅವರ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ಆದರೆ, ವಿಚಾರಣಾ ನ್ಯಾಯಾಲಯ ಅಥವಾ ಹೈಕೋರ್ಟ್ ಅನುಮತಿಯಿಲ್ಲದೆ ನಾಗೇಂದ್ರ ಅವರು ದೇಶ ಬಿಟ್ಟು ತೆರಳುವಂತಿಲ್ಲ ಎಂಬ ನಿರ್ಬಂಧವನ್ನು ನ್ಯಾಯಾಲಯವು ಮುಂದುವರಿಸಿದೆ.