
ರಾಜ್ಯದ ಮತದಾರರ ಪಟ್ಟಿ ಸುಧಾರಣೆಗಾಗಿ ಕೇಂದ್ರ ಚುನಾವಣಾ ಆಯೋಗವು 'ವಿಶೇಷ ಸಾಂದ್ರ ಪರಿಷ್ಕರಣೆ' ಅಡಿಯಲ್ಲಿ ಸುಮಾರು 43.8 ಲಕ್ಷ ಮತದಾರರಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದು, ಈ ಪ್ರಕ್ರಿಯೆಯು ಆಗಸ್ಟ್ 24 ರಿಂದ ಆರಂಭವಾಗಲಿದೆ.
ರಾಜ್ಯದ ಒಟ್ಟು 4.5 ಕೋಟಿ ಮತದಾರರಲ್ಲಿ ಸುಮಾರು ಶೇ 9.8 ರಷ್ಟು ಜನರಿಗೆ ಈ ನೋಟಿಸ್ ತಲುಪಲಿದ್ದು, ಇದರಲ್ಲಿ ಅರ್ಧದಷ್ಟು ಅಂದರೆ ಬರೋಬ್ಬರಿ 24 ಲಕ್ಷಕ್ಕೂ ಹೆಚ್ಚು ನೋಟಿಸ್ಗಳು ಬೆಂಗಳೂರು ನಗರ ಒಂದರಲ್ಲೇ ಜಾರಿಯಾಗಲಿವೆ.
ಮತದಾರರ ವಿವರಗಳಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ನೋಟಿಸ್ ಸ್ವೀಕರಿಸುವ ಮತದಾರರು ನಿಗದಿತ ಸಮಯದೊಳಗೆ ತಮ್ಮ ದಾಖಲೆಗಳನ್ನು ಸಲ್ಲಿಸಿ ದೋಷಗಳನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ.