
ಜುಲೈ 20ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಸಂಜಯ್ ಕುಮಾರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ವತಂತ್ರ ಭಾರದ್ವಾಜ್ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಬೈಕ್ನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಆರೋಪಿಯನ್ನು ಜಂಟಿ ಪಡೆಗಳು ವಶಕ್ಕೆ ಪಡೆದಿವೆ.
ಪಾಡ್ಕಾಸ್ಟ್ ವಿಡಿಯೋವೊಂದರಲ್ಲಿ ತಾನೇ ಹಲ್ಲೆ ನಡೆಸಿರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದ ಸ್ವತಂತ್ರ ಭಾರದ್ವಾಜ್, ನಂತರ ಅದು ಆತ್ಮರಕ್ಷಣೆಗಾಗಿ ಎಂದು ಸಮರ್ಥಿಸಿಕೊಂಡಿದ್ದರು.