
ಪ್ರಧಾನಿ ನರೇಂದ್ರ ಮೋದಿ ಅವರು 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪುಕೋಟೆಯಿಂದ ಭಾಷಣ ಮಾಡಿದ್ದು, ಯುವಶಕ್ತಿ, ಶಿಕ್ಷಣ ಮತ್ತು ಡಿಜಿಟಲ್ ಭಾರತದ ಭವಿಷ್ಯದ ಕುರಿತು ಒತ್ತು ನೀಡಿದ್ದಾರೆ.
ಕಳೆದ 12 ವರ್ಷಗಳಲ್ಲಿ ದೇಶದ ಅಭಿವೃದ್ಧಿ ವೇಗ ಪಡೆದಿದ್ದು, ಸರ್ಕಾರವು 25 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ ಎಂದು ಪ್ರಧಾನಿ ಮಾಹಿತಿ ನೀಡಿದ್ದಾರೆ.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದು, ಸೆಮಿಕಂಡಕ್ಟರ್ ಪ್ಲಾಂಟ್ಗಳ ಸ್ಥಾಪನೆಯ ಮೂಲಕ ಆತ್ಮನಿರ್ಭರ ಭಾರತದತ್ತ ದಾಪುಗಾಲು ಹಾಕಲಾಗುತ್ತಿದೆ.