
ಚಂಡಮಾರುತ ಪ್ರಸರಣದ ಪ್ರಭಾವದಿಂದ ಉತ್ತರಾಖಂಡ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಕೊಂಕಣ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಐಎಂಡಿ ಆರೆಂಜ್ ಅಲರ್ಟ್ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆಗಸ್ಟ್ 6ರಂದು ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ವಿವಿಧೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ ಮತ್ತು ಜುಲೈನಲ್ಲಿ ಮಳೆ ಕೊರತೆ ಎದುರಿಸಿದ್ದ ಭಾರತದಲ್ಲಿ, ಆಗಸ್ಟ್ ತಿಂಗಳ ಮೊದಲ ವಾರದಿಂದ ಮುಂದಿನ ಒಂದು ವಾರದವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.