
ಕೋಲ್ಕತ್ತಾದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 10 ಟನ್ ರಾಸಾಯನಿಕ ಮಿಶ್ರಿತ ಅಡಿಕೆಯನ್ನು ಮುಳಬಾಗಿಲು ಟಿಎಚ್ಓ ಡಾ. ಸುಗುಣ ನೇತೃತ್ವದಲ್ಲಿ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಕೋಲಾರದಲ್ಲಿ ಜಪ್ತಿ ಮಾಡಿದ್ದಾರೆ.
ಆಹಾರದಲ್ಲಿ ಕಲರಿಂಗ್ ಏಜೆಂಟ್ಗಳನ್ನು ಬಳಸಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಹೆಚ್ಚಿನ ಪರಿಶೀಲನೆಗಾಗಿ ಸ್ಯಾಂಪಲ್ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಬ್ರಾಂಡೆಡ್ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಸರ್ಕಾರಿ ಲ್ಯಾಬ್ಗಳಲ್ಲಿ ಮರುಪರಿಶೀಲನೆ ನಡೆಸಲು ಮುಂದಾಗಿದ್ದು, ಸಚಿವ ರಾಮಲಿಂಗಾ ರೆಡ್ಡಿ ಕಠಿಣ ಕ್ರಮದ ಸೂಚನೆ ನೀಡಿದ್ದಾರೆ.