
ಚಾಮರಾಜನಗರದ ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಆಗಸ್ಟ್ 14ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ನಾಲ್ಕು ಎಫ್ಐಆರ್ಗಳನ್ನು ಸಿಐಡಿ ವಿಶೇಷ ಘಟಕಕ್ಕೆ ಹಸ್ತಾಂತರಿಸಲಾಗಿದೆ.
ಮೃತರು ಕಳ್ಳಬೇಟೆಗೆ ಬಂದಿದ್ದರು ಎಂಬ ಅರಣ್ಯ ಇಲಾಖೆಯ ಆರೋಪದ ಬಗ್ಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಈ ಪ್ರಕರಣವು ರಾಜ್ಯ ಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.