
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಚಿಕನ್ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆಜಿಗೆ ₹5 ಶುಲ್ಕ ನಿಗದಿಪಡಿಸಿರುವುದನ್ನು ವಿರೋಧಿಸಿ ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಬಂದ್ಗೆ ಕರೆ ನೀಡಿದೆ.
ಈ ಪ್ರತಿಭಟನೆಯ ಭಾಗವಾಗಿ ಸೆಪ್ಟೆಂಬರ್ 3 ಮತ್ತು 4 ರಂದು ಬೆಂಗಳೂರಿನ ಸುಮಾರು 6 ರಿಂದ 7 ಸಾವಿರ ಚಿಕನ್ ಅಂಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಡಲಿವೆ.
ತ್ಯಾಜ್ಯ ವಿಲೇವಾರಿ ಶುಲ್ಕದ ವಿರುದ್ಧ ಪೌಲ್ಟ್ರಿ ಉದ್ಯಮಿಗಳು ಗುರುವಾರ ಮತ್ತು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.