
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಕ್ಕರೆ ಬೆಲೆ ಸ್ಥಿರತೆ ಕಾಪಾಡಲು ಕೇಂದ್ರ ಸರ್ಕಾರ ಸೆಪ್ಟೆಂಬರ್ 15ರಿಂದ ಜಾರಿಗೆ ಬರುವಂತೆ ದಾಸ್ತಾನು ಮಿತಿಯನ್ನು 2,000 ಕ್ವಿಂಟಾಲ್ಗೆ ನಿಗದಿಪಡಿಸಿದೆ.
ಈ ಹಿಂದೆ ಇದ್ದ 4,000 ಕ್ವಿಂಟಾಲ್ ಮಿತಿಯನ್ನು ಅರ್ಧಕ್ಕೆ ಇಳಿಸಲಾಗಿದ್ದು, ಕೋಲ್ಕತ್ತಾ ಹೊರತುಪಡಿಸಿ ದೇಶದ ಉಳಿದೆಲ್ಲಾ ಭಾಗಗಳಿಗೆ ಈ ನಿಯಮ ಅನ್ವಯವಾಗಲಿದೆ.
ಕೇಂದ್ರದ ಕಟ್ಟುನಿಟ್ಟಿನ ಕ್ರಮದಿಂದಾಗಿ ಇತ್ತೀಚೆಗೆ ಸಕ್ಕರೆ ಬೆಲೆ ಶೇ. 20ರಷ್ಟು ಕಡಿಮೆಯಾಗಿದ್ದು, ಅಕ್ರಮ ದಾಸ್ತಾನು ತಡೆಯಲು ಸರ್ಕಾರ ಆನ್ಲೈನ್ ಪೋರ್ಟಲ್ ಮೂಲಕ ನಿಗಾ ವಹಿಸಿದೆ.