
ವಿಶ್ವವಿದ್ಯಾಲಯಗಳಲ್ಲಿ ಆಡಳಿತ ಮಂಡಳಿಯನ್ನು ಪ್ರಶ್ನಿಸುವ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವುದು ಮತ್ತು ಅವರಿಗೆ ಶಿಕ್ಷೆ ನೀಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯ 13ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಅಸಹಿಷ್ಣು ಮನಸ್ಥಿತಿಯು ಭಾರತೀಯ ಸಂವಿಧಾನದ ಮೂಲಭೂತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.
ಪ್ರಜಾಪ್ರಭುತ್ವದ ಉಳಿವಿಗೆ ಭಿನ್ನಾಭಿಪ್ರಾಯಗಳನ್ನು ರಕ್ಷಿಸುವುದು ಅತ್ಯಗತ್ಯವಾಗಿದ್ದು, ಕಾನೂನು ವೃತ್ತಿಪರರು ಸಮಾಜದಲ್ಲಿ ಸ್ವಾತಂತ್ರ್ಯ ಮತ್ತು ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಅವರು ಕರೆ ನೀಡಿದರು.