
ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರೈತರ ಪರವಾಗಿ ನಿಲ್ಲುವುದಾಗಿ ಹಾಗೂ ವಿಶೇಷ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮಲೆನಾಡಿನಲ್ಲಿ ಬಗರ್ ಹುಕುಂ ಸಾಗುವಳಿ ದೊಡ್ಡ ಸಂಖ್ಯೆಯಲ್ಲಿದ್ದು, ಕಾಫಿ ಭೂಮಿ ಗುತ್ತಿಗೆ ಹಾಗೂ ಇತರ ಸಮಸ್ಯೆಗಳನ್ನು ಬಗೆಹರಿಸಲು ಸಮಗ್ರ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಹೆಚ್ಚಾಗುತ್ತಿದ್ದು, ಕಸ್ತೂರಿ ರಂಗನ್ ವರದಿ ವಿಶೇಷ ಅಧಿವೇಶನದ ಬಳಿಕ ಬರಗಾಲದ ಸ್ಥಿತಿಯ ಬಗ್ಗೆಯೂ ವಿಶೇಷ ಅಧಿವೇಶನ ನಡೆಸಿ ಎರಡು-ಮೂರು ದಿನಗಳಲ್ಲಿ ಹೊಸ ಬರಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.