
ಆಗಸ್ಟ್ 2ರಂದು ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವಿಜಯಪುರ ಜಿಲ್ಲೆಯ ತಿಕೋಟಾ ಕೇಂದ್ರದಿಂದ 141 ಒಎಂಆರ್ ಉತ್ತರ ಪತ್ರಿಕೆಗಳು ನಾಪತ್ತೆಯಾಗಿವೆ.
ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದ್ದ 432 ಒಎಂಆರ್ ಶೀಟ್ಗಳಲ್ಲಿ ಕೇವಲ 291 ಶೀಟ್ಗಳು ಮಾತ್ರ ವಾಪಸ್ ಬಂದಿದ್ದು, ಉಳಿದವುಗಳ ದುರ್ಬಳಕೆಯ ಆತಂಕ ವ್ಯಕ್ತವಾಗಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.