
ಕೊಡಗಿನ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗ ಮುರಳಿಕೃಷ್ಣ (43) ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ.
ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೋಂಸ್ಟೇ ಒಂದರಲ್ಲಿ ಉಳಿದುಕೊಂಡಿದ್ದ ಮುರಳಿಕೃಷ್ಣ ಅವರ ಮೇಲೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಳೆದ 8 ತಿಂಗಳಲ್ಲಿ ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಐವರು ಮೃತಪಟ್ಟಿದ್ದಾರೆ.