
ಕೆಪಿಎಸ್ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಬಯಲಾಗಿದ್ದು, ಈ ಸಂಬಂಧ 29 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪರೀಕ್ಷೆಯಲ್ಲಿ ಕಳಪೆ ಅಂಕ ಪಡೆದವರು ಟಾಪರ್ಸ್ ಪಟ್ಟಿಯಲ್ಲಿರುವುದು ಕಂಡುಬಂದಿದ್ದು, ಪ್ರತಿ ಹುದ್ದೆಗೆ 80 ಲಕ್ಷದಿಂದ 1 ಕೋಟಿ ರೂಪಾಯಿ ವರೆಗೆ ಹಣದ ವ್ಯವಹಾರ ನಡೆದಿರುವ ಶಂಕೆ ಇದೆ.
ಕೆಪಿಎಸ್ಸಿ ಅಧಿಕಾರಿಗಳು, ಅಧ್ಯಕ್ಷರು ಮತ್ತು ಸದಸ್ಯರು ಈ ಹಗರಣದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಬಸವರಾಜ್ ಕನ್ನಾಳೆಯ ಮನೆಯಲ್ಲಿ ದೊರೆತ ಡೈರಿಯು ಪ್ರಮುಖ ಸಾಕ್ಷ್ಯವಾಗಿದೆ.