
ಚಾಮರಾಜನಗರದ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರಿಗೆ ಪ್ರಚೋದನೆ ನೀಡಿದ ಆರೋಪ ಕೇಳಿಬಂದಿದೆ.
ಪ್ರತಿಭಟನಾಕಾರರನ್ನು ಪ್ರಚೋದಿಸುತ್ತಿರುವ ವಿಡಿಯೋದಲ್ಲಿ ಕಾಣಿಸಿಕೊಂಡ ವ್ಯಕ್ತಿ 'ಮರಿ ವೀರಪ್ಪನ್' ಎಂದೇ ಕುಖ್ಯಾತಿ ಪಡೆದ ಗಂಗನದೊಡ್ಡಿಯ ಗೋವಿಂದ ಎಂದು ಗುರುತಿಸಲಾಗಿದ್ದು, ಈತ 2025ರ ಅಕ್ಟೋಬರ್ 2ರ ಹುಲಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾನೆ.
ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ನೇತೃತ್ವದ ತಂಡವನ್ನು ರಚಿಸಿದ್ದು, ಮೃತಪಟ್ಟವರು ಅಮಾಯಕರಾ ಅಥವಾ ಬೇಟೆಗಾರರೇ ಎಂಬುದು ತನಿಖಾ ವರದಿಯ ನಂತರವಷ್ಟೇ ಸ್ಪಷ್ಟವಾಗಲಿದೆ.