
ವಿಜಯನಗರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 1,93,088 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, ಇದು ಮುಂಗಾರು ಬಿತ್ತನೆಯ ಶೇ 90ರಷ್ಟು ಪ್ರದೇಶವಾಗಿದೆ.
ಮೆಕ್ಕೆಜೋಳ, ಹೈಬ್ರಿಡ್ ಜೋಳ, ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳು ಕಾಳು ಕಟ್ಟುವ ಹಂತದಲ್ಲಿ ಮಳೆ ಇಲ್ಲದೆ ಒಣಗಿ ಹೋಗಿದ್ದು, ಜಿಲ್ಲೆಯಲ್ಲಿ ಹಸಿರು ಬರಗಾಲ ಉಂಟಾಗಿದೆ.
ಜಿಲ್ಲೆಯ 1.65 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದು, ಬರ ಪರಿಹಾರದ ಜೊತೆಗೆ ವಿಮಾ ಪರಿಹಾರ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ.