
ಬೆಳಗಾವಿ ಮತ್ತು ಗೋಕಾಕ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಅವರ ಕುಟುಂಬ ಸದಸ್ಯರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಚಿವರ ಆಪ್ತರಾದ ವೈ. ಮಂಜುನಾಥ್, ಗಿರೀಶ್ ಸೋನಾಲ್ಕರ್, ರಾಜು ಧರಗಶೆಟ್ಟಿ ಮತ್ತು ವಿಠಲ್ ಪರ್ಸನ್ನ ಅವರ ನಿವಾಸಗಳಲ್ಲೂ ಶೋಧ ಕಾರ್ಯಾಚರಣೆ ನಡೆದಿದೆ.
ಈ ದಾಳಿಯ ವೇಳೆ ಇಡಿ ಅಧಿಕಾರಿಗಳು ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ವೈ. ಮಂಜುನಾಥ್ ಅವರ ನಿವಾಸದ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ.