
ರಾಜ್ಯದ ಬರ ಪರಿಸ್ಥಿತಿ ಮತ್ತು ನೈಸ್ ಯೋಜನೆ ವಿವಾದಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಿಡದಿ ಟೌನ್ಶಿಪ್ ಯೋಜನೆಯಿಂದ ರೈತರು ಸಾವಿರಾರು ಎಕರೆ ಭೂಮಿ ಕಳೆದುಕೊಳ್ಳುತ್ತಿದ್ದು, ಈ ಬಗ್ಗೆ ಸದನದಲ್ಲಿ ದನಿಯೆತ್ತುವಂತೆ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.
ನೈಸ್ ಯೋಜನೆಗೆ ಸಂಬಂಧಿಸಿದಂತೆ ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲು ಪಕ್ಷದ ಶಾಸಕರಿಗೆ ನಿರ್ದೇಶನ ನೀಡಲಾಗಿದೆ.