
ಮುಂದಿನ 7 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಳಿದ ಜಿಲ್ಲೆಗಳು ಸೇರಿದಂತೆ ಒಟ್ಟು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಉತ್ತರ ಕರ್ನಾಟಕದ 10 ಜಿಲ್ಲೆಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.