
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಮತ್ತು ಮುಂಬರುವ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಗಿದೆ.
ತಾಂತ್ರಿಕ ಕಾರಣಗಳಿಂದ 23 ಲಕ್ಷ ಜನರು ಪಿಂಚಣಿಯಿಂದ ವಂಚಿತರಾಗಿರುವ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ.
ಕೆಪಿಎಸ್ಸಿ ನೇಮಕಾತಿಯಲ್ಲಿ ಯುವಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ರೈತರ ಧ್ವನಿಯಾಗಿ ಸದನದಲ್ಲಿ ವಿಷಯ ಮಂಡಿಸಲು ವಿಜಯೇಂದ್ರ ಸೂಚಿಸಿದ್ದಾರೆ.