
ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ ಪ್ರಕರಣದಲ್ಲಿ 3 ಕೋಟಿ ರೂಪಾಯಿಗೂ ಹೆಚ್ಚು ನಗದು ಮತ್ತು ಕಿಕ್ಬ್ಯಾಕ್ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
ಪ್ರಕರಣದ ದಾಖಲೆಗಳನ್ನು ಎಲ್ಲೂ ಸೋರಿಕೆ ಮಾಡದಂತೆ ಇಡಿ ನಿರ್ದೇಶಕ ರಾಹುಲ್ ನವೀನ್ ತಮ್ಮ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ನಿಷ್ಪಕ್ಷಪಾತವಾಗಿ ಸಿಕ್ಕಿರುವ ಮಾಹಿತಿ ಆಧರಿಸಿ ಮುಂದಿನ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.