ಬಳ್ಳಾರಿ ಎಪಿಎಂಸಿ ಆವರಣದಲ್ಲಿ ನಿಯಮ ಉಲ್ಲಂಘಿಸಿ ಪೆಟ್ರೋಲ್ ಬಂಕ್ಗೆ ನಿವೇಶನ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸಹಾಯಕ ಆಯುಕ್ತರ ನೇತೃತ್ವದ ತಂಡ ತನಿಖಾ ವರದಿ ಸಲ್ಲಿಸಿದೆ.
ಉಪನೋಂದಣಾಧಿಕಾರಿಗಳ ಮಾರ್ಗಸೂಚಿಯಂತೆ ಪ್ರತಿ ಚದರ ಅಡಿಗೆ ₹5,000 ಬೆಲೆ ಇದ್ದರೂ, ಕೇವಲ ₹800ಕ್ಕೆ ಮಾರಾಟ ಮಾಡಿ ಸರ್ಕಾರಿ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಜುಲೈ 22ರಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ, ನಿಯಮ ಬಾಹಿರವಾಗಿ ಮಾರಾಟವಾದ ನಿವೇಶನವನ್ನು ವಾಪಸ್ ಪಡೆಯಲು ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗಿದೆ.