
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ನೀಡುವ ಬಗ್ಗೆ ಹೋಟೆಲ್ ಮಾಲೀಕರ ಸಂಘ ಇನ್ನೂ ನಿರ್ಧಾರ ಕೈಗೊಂಡಿಲ್ಲ.
ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್ ಅವರು ಬಂದ್ಗೆ ಒಂದು ವಾರ ಇರುವಾಗ ಹೋಟೆಲ್, ಬಾರ್ ಮತ್ತು ಬೇಕರಿ ಮಾಲೀಕರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ನಾಡು ನುಡಿಯ ವಿಚಾರದಲ್ಲಿ ಸಂಘವು ಯಾವಾಗಲೂ ಬೆಂಬಲ ನೀಡುತ್ತದೆ ಎಂದು ಸ್ಪಷ್ಟಪಡಿಸಿರುವ ಪಿ.ಸಿ. ರಾವ್, ಸದ್ಯಕ್ಕೆ ಬಂದ್ ಬೆಂಬಲದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ.