
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಡಿಕೆ ಶಿವಕುಮಾರ್ ಅವರು ದೂರವಾಣಿ ಕರೆ ಮಾಡಿ ಸೂಚಿಸಿದ್ದಾರೆ.
ಸಾಂವಿಧಾನಿಕ ಹುದ್ದೆಗೆ ಅವಮಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿರುವ ಹೊರಟ್ಟಿ, ಸದ್ಯಕ್ಕೆ ರಾಜೀನಾಮೆ ನೀಡದಿರಲು ನಿರ್ಧರಿಸಿ ವಿಪಕ್ಷ ನಾಯಕರೊಂದಿಗೆ ಚರ್ಚಿಸಲು ಮುಂದಾಗಿದ್ದಾರೆ.
ಪಕ್ಷದ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದು, ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾದರೆ ಎದುರಿಸುವುದಾಗಿ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.