
ತಮ್ಮ ಪುತ್ರಿ ರೂಪಕಲಾ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡಲು ತಾವು ಸ್ಥಾನ ತ್ಯಾಗ ಮಾಡುತ್ತಿದ್ದೀರಿ ಎಂಬ ವರದಿಗಳನ್ನು ಸಚಿವ ಕೆ.ಹೆಚ್. ಮುನಿಯಪ್ಪ ತಳ್ಳಿಹಾಕಿದ್ದಾರೆ.
ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಮುನಿಯಪ್ಪ, ಕೋಲಾರ ಲೋಕಸಭಾ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯನ್ನು ತಮಗೆ ನೀಡುವಂತೆ ರಾಹುಲ್ ಗಾಂಧಿಯವರಿಗೆ ಬೇಡಿಕೆ ಇಟ್ಟಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.