
ಸಾರ್ವಜನಿಕರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕರ್ನಾಟಕ ಉದ್ಯಾನವನ ಸಂರಕ್ಷಣೆ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ ಇದೆ.
ಉದ್ಯಾನವನಗಳ ಶೇ 5ರಷ್ಟು ಜಾಗವನ್ನು ಖಾಸಗಿ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಈ ಮಸೂದೆಯು ಪಾರ್ಕ್ಗಳ ನಾಶಕ್ಕೆ ಕಾರಣವಾಗುತ್ತದೆ ಎಂಬ ಆತಂಕ ಸಾರ್ವಜನಿಕರಲ್ಲಿ ವ್ಯಕ್ತವಾಗಿತ್ತು.
ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ನಿಂದಲೂ ವಿರೋಧ ವ್ಯಕ್ತವಾಗಿದ್ದು, ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಮಸೂದೆ ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಯಲಿದೆ.