
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಣದ ಡೀಲ್ ನಡೆದಿದೆ ಎಂದು ಕುಷ್ಟಗಿ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಗೆ ಸಿಕ್ಕಿರುವ ಎರಡು ಸಚಿವ ಸ್ಥಾನಗಳಲ್ಲಿ ಒಂದು ಪೇಮೆಂಟ್ ಕೋಟಾ ಎಂದು ಹೇಳಿರುವ ಅವರು, 100 ರಿಂದ 150 ಕೋಟಿ ರೂ. ಬೇಡಿಕೆ ಇತ್ತು ಎಂದಿದ್ದಾರೆ.
ಸಚಿವರಾದ ಶಿವರಾಜ ತಂಗಡಗಿ ಮತ್ತು ಬಸವರಾಜ ರಾಯರೆಡ್ಡಿ ಅವರು ತಕ್ಷಣವೇ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಬೇಕೆಂದು ಶಾಸಕರು ಆಗ್ರಹಿಸಿದ್ದಾರೆ.