
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸೈಲೆಂಟ್ ಆಗಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮಗೆ ಈಗ ಯಾವುದೇ ಜವಾಬ್ದಾರಿ ಇಲ್ಲದ ಕಾರಣ ಹೆಚ್ಚು ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಹಿಳಾ ಕೋಟಾ ಭರ್ತಿ ಮಾಡಿಲ್ಲ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿಲ್ಲ ಎಂದು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ.
ಆಗಸ್ಟ್ 15ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ತಾವು ನಿನ್ನೆ ಅಧಿವೇಶನದಲ್ಲಿ ಭಾಗವಹಿಸಿದ್ದಲ್ಲದೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದಾಗಿ ತಿಳಿಸಿದ್ದಾರೆ.