
ಮುಸಲ್ಮಾನರಲ್ಲಿರುವ ಬಹುಪತ್ನಿತ್ವವನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಮಹಿಳಾ ಹೋರಾಟಗಾರರಾದ ಝಾಕಿಯಾ ಸೊಮನ್ ಮತ್ತು ನೂರ್ಜೆಹಾನ್ ಸಫಿಯಾ ಸಲ್ಲಿಸಿದ ಅರ್ಜಿಯನ್ನು ಬಾಕಿ ಇರುವ ಇತರ ಅರ್ಜಿಗಳೊಂದಿಗೆ ಸೇರಿಸಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 82ರ ಅನ್ವಯ ದ್ವಿಪತ್ನಿತ್ವಕ್ಕೆ ನೀಡಲಾದ ವಿನಾಯಿತಿಯನ್ನು ರದ್ದುಪಡಿಸುವಂತೆ ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.