
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ಯಾವುದೇ ಅವಮಾನ ಎದುರಿಸಲು ಸಿದ್ಧ ಎಂದು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದೊಂದಿಗೆ ಮಾತುಕತೆ ನಡೆಸುವ ಮೂಲಕ ವಿವಾದ ಬಗೆಹರಿಸುವುದು ಪ್ರಜಾಪ್ರಭುತ್ವದ ಮಾರ್ಗ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಕಾವೇರಿ ನೀರು ತಮಿಳುನಾಡಿನ ಜನರಿಗೆ ಭಾವನಾತ್ಮಕ ವಿಷಯವಾಗಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶವಿಲ್ಲ ಎಂದು ವಿಜಯ್ ಸ್ಪಷ್ಟಪಡಿಸಿದ್ದಾರೆ.