
ಕಲಬುರಗಿ ಜಿಲ್ಲೆಯ ಮಹಾಗಾಂವ್ ಗ್ರಾಮದಲ್ಲಿ ಚಿಂಚೋಳಿ ಠಾಣೆಯ ಕಾನ್ಸ್ಟೇಬಲ್ ರಾಜಶೇಖರ್ ವರನಾಳ್ ಕುಡಿದ ನಶೆಯಲ್ಲಿ ರೇಷ್ಮಾ ಎಂಬ ಮಹಿಳೆಯ ಮನೆಗೆ ಪೆಟ್ರೋಲ್ ಸುಟ್ಟು ಬೆಂಕಿ ಹಚ್ಚಿದ್ದಾರೆ.
ತನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಕ್ಕೆ ಕೋಪಗೊಂಡು ಮಹಾಗಾಂವ್ ಠಾಣೆಯ ಪಿಎಸ್ಐ ಬಸವರಾಜ್ ಅವರ ಖಾಸಗಿ ಕಾರಿಗೂ ಆರೋಪಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.