
ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 1,295ಕ್ಕೆ ಏರಿಕೆಯಾಗಿದ್ದು, ಇದುವರೆಗೆ 13,093 ಜನರನ್ನು ರಕ್ಷಿಸಲಾಗಿದೆ.
ಚಿತ್ವಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 359 ಮೃತದೇಹಗಳು ಪತ್ತೆಯಾಗಿದ್ದು, ಒಟ್ಟು ಎಂಟು ಜಿಲ್ಲೆಗಳಲ್ಲಿ 1,293 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತ್ರಿಶೂಲಿ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ 9 ದಿನಗಳ ಕಾಲ ಸಿಲುಕಿದ್ದ ಕಬೀರ್ ಮಹಾರಾಜನ್ ಮತ್ತು ಸಂಜಯ್ ಶಾ ಎಂಬ ಇಬ್ಬರು ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.