
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನಟ ಧನ್ವೀರ್ ಭೇಟಿಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ದರ್ಶನ್ ಕುಟುಂಬದೊಂದಿಗೆ ಮನಸ್ತಾಪವಿದೆ ಎಂಬ ವದಂತಿಗಳ ನಡುವೆ, ಧನ್ವೀರ್ ವೈಮನಸ್ಸು ಮರೆತು ಜೈಲಿಗೆ ಭೇಟಿ ನೀಡಿದ್ದಾರೆ.
ದರ್ಶನ್ ಅವರಿಗೆ ಜಾಮೀನು ಕೊಡಿಸಲು ಕುಟುಂಬದವರು ಪ್ರಯತ್ನಿಸುತ್ತಿದ್ದು, ಇತ್ತೀಚೆಗೆ ಪತ್ನಿ ವಿಜಯಲಕ್ಷ್ಮಿ ಮತ್ತು ನಟಿ ರಕ್ಷಿತಾ ಪ್ರೇಮ್ ಕೂಡ ಭೇಟಿ ನೀಡಿದ್ದರು.