
ಸುರಂಗ ರಸ್ತೆ ಯೋಜನೆಯಲ್ಲಿ ಅದಾನಿ ಸಮೂಹಕ್ಕೆ ಲಾಭ ಮಾಡಿಕೊಡಲಾಗುತ್ತಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶನಿವಾರ ಮತ್ತು ಭಾನುವಾರ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.
ಕೆಆರ್ ಐಡಿಎಲ್ನಲ್ಲಿ 7% ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಪತ್ರ ಬರೆದಿದ್ದು, ಈ ಅಕ್ರಮದಿಂದ ಸುಮಾರು 800 ಕೋಟಿ ರೂ. ಸಂಗ್ರಹವಾಗಿದೆ ಎಂದು ಅಶೋಕ್ ದೂರಿದ್ದಾರೆ.
ಸರ್ಕಾರವು ಕೂಡಲೇ ಇಬ್ಬರು ಸಚಿವರನ್ನು ವಜಾ ಮಾಡಿ, ಪ್ರಕರಣವನ್ನು ಸಿಬಿಐ ಅಥವಾ ಲೋಕಾಯುಕ್ತ ತನಿಖೆಗೆ ವಹಿಸಬೇಕೆಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.