
ಪ್ರಧಾನಿ ಮೋದಿಯವರ 137ನೇ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೆಚ್ಚುಗೆ ಪಡೆದ ಬೆಂಗಳೂರಿನ ನಿಂಗಮ್ಮ, ಇದೀಗ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಆತಂಕಕ್ಕೀಡಾಗಿದ್ದಾರೆ.
ಪಿಎಂ ಸ್ವನಿಧಿ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ನಿಂಗಮ್ಮ, ಹೊಸಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಹೋಟೆಲ್ ನಡೆಸುತ್ತಿದ್ದು, ಜಿಬಿಎ ಅಧಿಕಾರಿಗಳು ತೆರವುಗೊಳಿಸುವಂತೆ ಸೂಚಿಸಿದ್ದಾರೆ.
ಈ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಶೇಕಡಾ 46 ರಷ್ಟು ಮಹಿಳೆಯರಿದ್ದು, ಸ್ವಾವಲಂಬಿ ಬದುಕಿಗೆ ಮಾದರಿಯಾಗಿದ್ದ ನಿಂಗಮ್ಮನಿಗೆ ಇದೀಗ ಜೀವನೋಪಾಯದ ಚಿಂತೆ ಎದುರಾಗಿದೆ.