
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಈಗಾಗಲೇ ಸಿಬಿಐ ತನಿಖೆ ನಡೆಸಿದ್ದು, ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಸಚಿವರ ರಾಜೀನಾಮೆಗೆ ಒತ್ತಾಯಿಸಿ ಕಳೆದ 5 ದಿನಗಳಿಂದ ವಿಪಕ್ಷಗಳು ಅಧಿವೇಶನದಲ್ಲಿ ಹೋರಾಟ ನಡೆಸುತ್ತಿದ್ದು, ರಾಜ್ಯಪಾಲರು ಯಾವುದೇ ಕ್ಷಣದಲ್ಲಿ ಪ್ರಾಸಿಕ್ಯೂಷನ್ಗೆ ಒಪ್ಪಿಗೆ ನೀಡುವ ಸಾಧ್ಯತೆಯಿದೆ.