
ಗದಗ ನಗರದ ಸೂರ್ಯ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ತಿಗಣೆಗಳ ಕಾಟ ಮತ್ತು ಕಳಪೆ ಆಹಾರ ಸರಬರಾಜಿನಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಹುಳು ಬಿದ್ದಿರುವ ಜೋಳ ಮತ್ತು ಗೋಧಿಯನ್ನು ಅಡುಗೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಅಧಿಕಾರಿಗಳು ಭೇಟಿ ನೀಡುವಾಗ ಮಾತ್ರ ಸ್ವಚ್ಛತೆಯ ನಾಟಕವಾಡುತ್ತಾರೆ ಎಂದು ದೂರಿದ್ದಾರೆ.
ಶುದ್ಧ ಕುಡಿಯುವ ನೀರಿನ ಅಭಾವ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ವಿದ್ಯಾರ್ಥಿಗಳು, ವಾರ್ಡನ್ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.