
ಸಂಪುಟದಲ್ಲಿನ ಅಸಮಾಧಾನ ಮತ್ತು ಸಾಮಾಜಿಕ ಸಮತೋಲನ ಕಾಯ್ದುಕೊಳ್ಳಲು ಎಂ. ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರನ್ನು ಸಚಿವರನ್ನಾಗಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.
ಸಚಿವ ಕೆ.ಎಚ್. ಮುನಿಯಪ್ಪ ಅವರ ಬದಲಿಗೆ ಪುತ್ರಿ ರೂಪ ಶಶಿಧರ್ ಅವರಿಗೆ ಅವಕಾಶ ನೀಡುವ ಹಾಗೂ ಬಳ್ಳಾರಿ ಜಿಲ್ಲೆಯ ಸಚಿವರ ಬದಲಾವಣೆಯ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.
ಕುರುಬ ಸಮುದಾಯದ ಪ್ರತಿನಿಧಿತ್ವ ಹೆಚ್ಚಿಸಲು ಬಸವರಾಜ್ ಶಿವಣ್ಣನವರ್ ಅವರ ಹೆಸರನ್ನು ಪರಿಗಣಿಸಲಾಗುತ್ತಿದ್ದು, ಪ್ರಾದೇಶಿಕ ಸಮತೋಲನಕ್ಕಾಗಿ ಮುಸ್ಲಿಂ ಸಚಿವರ ಬದಲಾವಣೆಗೂ ಪಕ್ಷದೊಳಗೆ ಚರ್ಚೆ ನಡೆದಿದೆ.