
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದಲ್ಲಿ ಜುಲೈ 30ರ ವರೆಗೂ ಆರೆಂಜ್ ಅಲರ್ಟ್ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿಗೆ ಜುಲೈ 28ರಂದು ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ, ಉತ್ತರ ಕನ್ನಡದ ಸಿದ್ದಾಪುರದಲ್ಲಿ 66.5 ಮಿ.ಮೀ ಮತ್ತು ಶಿವಮೊಗ್ಗದ ಆಗುಂಬೆ 1ರಲ್ಲಿ 66.4 ಮಿ.ಮೀ ಮಳೆಯಾಗಿದೆ.