
ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ಪ್ರಧಾನಿ, ಕೇಂದ್ರ ಸಚಿವರು ಮತ್ತು ವಿರೋಧ ಪಕ್ಷದ ನಾಯಕರಿರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥಿಸಿಕೊಂಡಿದೆ.
2023ರ ಕಾಯ್ದೆಯಡಿ ಆಯ್ಕೆ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠವು ತೀರ್ಪನ್ನು ಕಾಯ್ದಿರಿಸಿದೆ.
ಪ್ರಧಾನಮಂತ್ರಿಯವರ ಹುದ್ದೆಗೆ ಸಾಂವಿಧಾನಿಕ ಪವಿತ್ರತೆ ಇದೆ ಎಂದು ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಿಯವರ ಪಾತ್ರವನ್ನು ಶಂಕಿಸಲು ಕಾರಣವಿಲ್ಲ ಎಂದು ತಿಳಿಸಿದ್ದಾರೆ.