
ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗ್ರಾಮೀಣ ಕೃಪಾಂಕ ವ್ಯವಸ್ಥೆಯು ನ್ಯಾಯಾಲಯದಲ್ಲಿ ಮಾನ್ಯವಾಗದಿರುವುದು ವ್ಯವಸ್ಥೆಯ ದೋಷ ಎಂದು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ತಂದೆ ಎಸ್. ಬಂಗಾರಪ್ಪ ಅವರು ಜಾರಿಗೆ ತಂದಿದ್ದ ಈ ವ್ಯವಸ್ಥೆಯಿಂದ ಅನೇಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಸಿಕ್ಕಿತ್ತು ಎಂದು ಸಚಿವರು ಸ್ಮರಿಸಿದರು.
ಮಕ್ಕಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಲು ಸಂವಿಧಾನದ ಪೀಠಿಕೆಯನ್ನು ಓದಿಸುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಹಮ್ಮಿಕೊಂಡಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.