
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪುತ್ರ ಸಾಜೀಬ್ ವಾಝೇದ್, ಬಾಂಗ್ಲಾದೇಶದಲ್ಲಿನ ಭದ್ರತಾ ಪರಿಸ್ಥಿತಿ ಭಾರತಕ್ಕೆ ಬೆದರಿಕೆಯಾಗಬಹುದು ಎಂದು ಎಚ್ಚರಿಸಿದ್ದಾರೆ.
ಬಾಂಗ್ಲಾದೇಶವು ವಿಫಲ ರಾಷ್ಟ್ರವಾಗುತ್ತಿದ್ದು, ಇದನ್ನು ತಡೆಯದಿದ್ದರೆ ಮುಂದಿನ ದಿನಗಳಲ್ಲಿ ಜಾಗತಿಕ ಭಯೋತ್ಪಾದಕರು ಅಲ್ಲಿಂದಲೇ ಉದ್ಭವಿಸಲಿದ್ದಾರೆ ಎಂದು ಅವರು ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
ಭಾರತದ ಪೂರ್ವ ಗಡಿಯಲ್ಲಿ ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನವಾಗಿ ಬದಲಾಗುತ್ತಿದೆ ಎಂದು ವಾಝೇದ್ ಕಳವಳ ವ್ಯಕ್ತಪಡಿಸಿದ್ದಾರೆ.