
80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು, ಕಳೆದ ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದು ತಿಳಿಸಿದ್ದಾರೆ.
ಉಚಿತ ಧಾನ್ಯ ಯೋಜನೆಯಡಿ 80 ಕೋಟಿ ಜನರಿಗೆ ಆಹಾರ ಭದ್ರತೆ ಒದಗಿಸಲಾಗಿದ್ದು, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಮೂಲಕ 60 ಕೋಟಿ ಜನರಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.
ಪರೀಕ್ಷಾ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿಸಲು ಸರ್ಕಾರವು ಸಮಗ್ರ ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ರಾಷ್ಟ್ರಪತಿಗಳು ಆಗಸ್ಟ್ 14ರ ಭಾಷಣದಲ್ಲಿ ಸ್ಪಷ್ಟಪಡಿಸಿದ್ದಾರೆ.