Health & Environment
ಯಾದಗಿರಿ: ರಾಸಾಯನಿಕ ಸೋರಿಕೆಯಿಂದ ಮೂವರು ಕಾರ್ಮಿಕರ ಸಾವು

ಯಾದಗಿರಿ: ರಾಸಾಯನಿಕ ಸೋರಿಕೆಯಿಂದ ಮೂವರು ಕಾರ್ಮಿಕರ ಸಾವು

tv9kannada2h
THE BRIEF
1

ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದ ಸಿಐಎಲ್ ಲ್ಯಾಬೊರೇಟರಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

2

ಮೃತಪಟ್ಟವರನ್ನು ವಿಕ್ರಂ ಸಿಂಗ್, ಸಂಜಯ್ ಸಿಂಗ್ ಮತ್ತು ಗಣೇಶ್ ಎಂದು ಗುರುತಿಸಲಾಗಿದ್ದು, ಅಸ್ವಸ್ಥಗೊಂಡಿರುವ ಶಿವಕುಮಾರ್ ಮತ್ತು ಹೇಮಂತ್ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

3

ಪ್ರಾಥಮಿಕ ತನಿಖೆಯ ಪ್ರಕಾರ ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಈ ದುರಂತ ಸಂಭವಿಸಿದ್ದು, ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.