
ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಹಿತದೃಷ್ಟಿಯಿಂದ ಐವರು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಾಹಿತ್ಯ ಎಂ.ಆಲದಕಟ್ಟಿ ದಾವಣಗೆರೆ ಜಿಪಂ ಸಿಇಒ ಆಗಿ, ಗಿಟ್ಟೆ ಮಾಧವ್ ವಿಠ್ಠಲ್ ರಾವ್ ಬೀದರ್ ಜಿಪಂ ಸಿಇಒ ಆಗಿ ಮತ್ತು ಜುಬಿನ್ ಮೊಹಾಪಾತ್ರ ಯಾದಗಿರಿ ಜಿಪಂ ಸಿಇಒ ಆಗಿ ನೇಮಕಗೊಂಡಿದ್ದಾರೆ.
ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ, ಇಬ್ಬರು ಅಧಿಕಾರಿಗಳ ವರ್ಗಾವಣೆ ಚುನಾವಣಾ ಆಯೋಗದ ಅಂತಿಮ ಅನುಮೋದನೆಗೆ ಒಳಪಟ್ಟಿರುತ್ತದೆ.