
ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಗುರುವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿ, ಕೀಳು ಮಟ್ಟದ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರು ಸಂಸತ್ತಿನ ನಿಯಮ 352 ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ, ಈ ವಿಷಯವನ್ನು ತನಿಖೆಗಾಗಿ ಹಕ್ಕುಬಾಧ್ಯತೆಗಳ ಸಮಿತಿಗೆ ಒಪ್ಪಿಸುವಂತೆ ಸ್ಪೀಕರ್ ಬಿರ್ಲಾ ಅವರಿಗೆ ಠಾಕೂರ್ ಮನವಿ ಮಾಡಿದ್ದಾರೆ.
ಸದನದಲ್ಲಿ 'ಮೂರ್ಖ' ಮತ್ತು 'ಅಂಧಭಕ್ತ' ಎಂಬ ಪದಗಳನ್ನು ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರು ಸದನ ಮತ್ತು ಗೃಹ ಸಚಿವ ಅಮಿತ್ ಶಾ ಅವರಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಠಾಕೂರ್ ಆಗ್ರಹಿಸಿದ್ದಾರೆ.