
ಬೆಂಗಳೂರಿನ ಬ್ಯಾಡರಹಳ್ಳಿಯ ಭಾರತ ನಗರದಲ್ಲಿ ಕಳೆದ 15 ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಬೀದಿನಾಯಿಗಳ ಮೇಲೆ ದಾಳಿ ಮಾಡುತ್ತಿರುವುದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ.
ಬನಶಂಕರಿ 6ನೇ ಹಂತದ 2ನೇ ಬ್ಲಾಕ್ನಲ್ಲಿಯೂ ಜುಲೈ 26ರ ಸಂಜೆ 7 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.
ಅರಣ್ಯ ಇಲಾಖೆಯು ಚಿರತೆ ಸೆರೆಗೆ ಬೋನ್ ಇಟ್ಟಿದ್ದರೂ, ಕಳೆದ 15 ದಿನಗಳಿಂದ ಚಿರತೆ ಸೆರೆಯಾಗದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.