
ಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಲಕೋಟೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ ಬೆಳೆ ಹಾನಿಯ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಈ ಸಮೀಕ್ಷೆಯಲ್ಲಿ ವಿಧಾನ ಸಭೆ ಉಪಸಭಾಧ್ಯಕ್ಷ ಮಂಕಾಳು ವೈದ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್ ಅವರು ಸಿಎಂ ಜೊತೆಗಿದ್ದರು.
ರಾಜ್ಯದಲ್ಲಿ ಎಲ್ಲೂ ಉತ್ತಮ ಬೆಳೆ ಆಗಿಲ್ಲ ಎಂದು ತಿಳಿಸಿದ ಸಿಎಂ, ಬರ ಘೋಷಣೆ ಪ್ರಕ್ರಿಯೆ ನಡೆಯುತ್ತಿದ್ದು, ಈ ಕುರಿತು ವರದಿ ತರಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.