
ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ರಾಯಚೂರಿನ ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇಗಿಲು ಹೊತ್ತು ಪಾದಯಾತ್ರೆಗೆ ಚಾಲನೆ ನೀಡಿದ್ದು, ಈ ಯಾತ್ರೆಯು ರಾಯಚೂರಿನ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಸಾಗಲಿದೆ.
ಒಟ್ಟು 10 ದಿನಗಳ ಕಾಲ ನಡೆಯಲಿರುವ ಈ ಪಾದಯಾತ್ರೆಯು ಸೆಪ್ಟೆಂಬರ್ 10ರವರೆಗೆ ಮುಂದುವರಿಯಲಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಜನರ ಮುಂದಿಡಲಾಗುತ್ತಿದೆ.